Sunday, April 14, 2013

ಸರಳ ಅಂಬೇಡ್ಕರ್ ಜಯಂತಿ ಆಚರಣೆ

ಮಂಗಳೂರು. ಏಪ್ರಿಲ್. 14 : ಜಿಲ್ಲಾಡಳಿತದ ವತಿಯಿಂದ ಇಂದು ಪುರಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ದಿನಾಚರಣೆಯನ್ನು ಜಿಲ್ಲಾಧಿಕಾರಿ ಹರ್ಷಗುಪ್ತ ಅವರು ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕುವ ಮೂಲಕ ಆಚರಿಸಿದರು.
ಸರಳ ಸಮಾರಂಭಕ್ಕೆ ಸಿಟಿ ಪೊಲೀಸ್ ಆಯುಕ್ತರಾದ ಮನಿಷ್ ಕರ್ಬಿಕರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಭಿಷೇಕ್ ಗೋಯಲ್, ಜಿಲ್ಲಾ ಪಂಚಾಯತ್ ಸಿಇಒ ಡಾ ಕೆ ಎನ್ ವಿಜಯಪ್ರಕಾಶ್, ಮೂಡಾ ಕಮಿಷನರ್ ಅಜಿತ್ ಕುಮಾರ್ ಹೆಗ್ಡೆ, ಡಿಸಿಪಿ ಮುತ್ತುರಾಯ, ಪಾಲಿಕೆ ಆಯುಕ್ತರಾದ ಡಾ ಹರೀಶ್ ಕುಮಾರ್, ಸಮಾಜ ಕಲ್ಯಾಣಾಧಿಕಾರಿ ಅರುಣ್ ಫುರ್ಟಡೋ ಉಪಸ್ಥಿತರಿದ್ದರು.

 

No comments: