Thursday, May 2, 2013

ಸ್ವಯಂಪ್ರೇರಿತರಾಗಿ ಮತದಾನ ಮಾಡಿ: ಸಿಇಓ

ಮಂಗಳೂರು, ಮೇ.02 :ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ; ತಪ್ಪದೆ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಕೆ ಎನ್ ವಿಜಯಪ್ರಕಾಶ್ ಹೇಳಿದರು.
ಅವರು ಬುಧವಾರ  ಸಂಜೆ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಮೀನುಗಾರರನ್ನು ಗಮನದಲ್ಲಿರಿಸಿ ಆಯೋಜಿಸಲಾದ ಮತದಾರರ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.
ನೂರಾರು ಮೀನುಗಾರ ಬಂಧುಗಳು ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮತದಾನ ಮಾಡುವ ಬಗ್ಗೆ ಹಾಗೂ ಇತರರಿಗೆ  ಮತದಾನ ಮಾಡುವಂತೆ ಮನವೊಲಿಸುವ ಪ್ರಮಾಣವಚನ ಬೋಧಿಸಲಾಯಿತು. ನಿನ್ನೆಯಿಂದ ಐದು ದಿನಗಳ ಕಾಲ 'ವೋಟ್ ಮಿ' ಎಂಬ ಸಂದೇಶದೊಂದಿಗೆ ದೋಣಿ ಸಮುದ್ರದಲ್ಲಿ ಸಂಚರಿಸಲಿದೆ.
ಮೀನುಗಾರರ ಬದುಕೇ ಸವಾಲುಗಳಿಂದೊಡಗೂಡಿದ ಸಾಹಸದ ಬದುಕು. ಮೀನುಗಾರರೆಲ್ಲರೂ ನೈತಿಕ ಮತದಾನಕ್ಕೆ ಆದ್ಯತೆ ನೀಡಿ ಮೇ ಐದರಂದು ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂಬ ಸಂದೇಶ ನೀಡಿದರು.
ಸಭೆಯಲ್ಲಿ ಯತೀಶ್ ಬೈಕಂಪಾಡಿ, ಹರೀಶ್ಚಂದ್ರ ಪುತ್ರನ್, ಅಬ್ದುಲ್ ರೆಹಮಾನ್,ಯೂತ್ ಕ್ಲಬ್ ನ ಚೇತನ್ ಬೆಂಗ್ರೆ, ಮೀನುಗಾರಿಕಾ ಇಲಾಖೆ ಉಪನಿರ್ದೇಶಕರಾದ ಸುರೇಶ್ ಕುಮಾರ್, ಸಹಾಯಕ ನಿರ್ದೇಶಕರಾದ ಪಾಶ್ರ್ವನಾಥ್ ಮುಂತಾದವರು ಭಾಗವಹಿಸಿದ್ದರು.

No comments: